ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರ ತನ್ನ ಸಾರಿಗೆ ವ್ಯವಸ್ಥೆಯಲ್ಲಿ ಸಾಕಷ್ಟು ಉತ್ತಮ ಸೌಲಭ್ಯವನ್ನು ಒದಗಿಸುತ್ತಿದ್ದು, ಪ್ರಯಾಣಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಇದೀಗ ಇಲ್ಲಿಯವರೆಗಿನ ಚಿಲ್ಲರೆ ಸಮಸ್ಯೆಗೆ ದೊಡ್ಡ ರಿಲೀಫ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಗುಡ್ ನ್ಯೂಸ್ ಅನ್ನು ನೀಡಿದೆ.
ಕ್ಯಾಶ್ ಲೆಸ್ ಪ್ರಯಾಣಕ್ಕೆ ಚಾಲನೆ!
ಬಸ್ಸಲೆ ಪ್ರಯಾಣಿಸುವಾಗ ಚಿಲ್ಲರೆ ಸಮಸ್ಯೆ ಉಂಟಾಗುವುದು ಸಾಮಾನ್ಯ ಇದರಿಂದ ಕಂಡಕ್ಟರ್ ಗಳಿಗೆ ಹಾಗೂ ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗುತ್ತಿತ್ತು. ಈಗಾಗಲೇ ಕ್ಯಾಶ್ ಲೆಸ್ ಪ್ರಯಾಣಕ್ಕೆ ರಾಜ್ಯ ಸರ್ಕಾರ ಒತ್ತು ನೀಡಿತ್ತು. ಆದರೂ ಇಲ್ಲಿವರೆಗೆ ಕ್ಯಾಶ್ ಲೆಸ್ ಪ್ರಯಾಣವನ್ನು (Cashless Travel) ಅನುಷ್ಠಾನಕ್ಕೆ ತರಲು ಸಾಧ್ಯವಾಗಿರಲಿಲ್ಲ.
ಇದೇ ಬರುವ ನವೆಂಬರ್ ತಿಂಗಳಿನಲ್ಲಿ ರಾಜ್ಯದಲ್ಲಿ 8000ಕ್ಕೂ ಅಧಿಕ ಬಸ್ಸುಗಳಲ್ಲಿ ಹೊಸ ಹ್ಯಾಂಡಲ್ಡ್ ಎಲೆಕ್ಟ್ರಾನಿಕ್ ಮಷೀನ್ ಬಳಕೆಯನ್ನು ಆರಂಭಿಸಲಾಗುವುದು. ಇದರಿಂದ ಪ್ರಯಾಣಿಕರು ನಗದು ರಹಿತ ಪ್ರಯಾಣ (Cashless Travel) ಮಾಡಬಹುದು. ಅಂದರೆ ಯುಪಿಐ ಕ್ರೆಡಿಟ್ ಇಲ್ಲವೇ ಡೆಬಿಟ್ ಕಾರ್ಡ್ ಬಳಸಿ ಟಿಕೆಟ್ ಹಣವನ್ನು ಪಾವತಿಸಬಹುದು.
ಹ್ಯಾಂಡಲ್ ಎಲೆಕ್ಟ್ರಾನಿಕ್ ಮಷೀನ್!
ಎಲೆಕ್ಟ್ರಾನಿಕ್ ಟಿಕೆಟ್ ಮಷೀನ್ ಬಳಕೆ ಮಾಡುವುದರಿಂದ ಪ್ರಯಾಣಿಕರಿಗೆ ಹಾಗೂ ನಿರ್ವಾಹಕರಿಗೆ ಸಹಾಯಕವಾಗಲಿದೆ ಎಂದು ಕೆಎಸ್ಆರ್ಟಿಸಿ (KSRTC) ಅಧಿಕಾರಿಗಳು ತಿಳಿಸಿದ್ದಾರೆ. ಕೆಎಸ್ಆರ್ಟಿಸಿ ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಬಸ್ಗಳಲ್ಲಿ ನಗದುರಹಿತ ಟಿಕೆಟ್ ಬಳಕೆ ಈಗಾಗಲೇ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. ಅಧಿಕೃತವಾಗಿ ಮುಂದಿನ ತಿಂಗಳು ರಾಜ್ಯದ ಎಲ್ಲಾ ಬಸ್ಗಳಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ.