ಬೇರೆ ಬೇರೆ ಇಲಾಖೆಗಳು ಕೊಡುವ ರಾಜ್ಯ ವಿದ್ಯಾರ್ಥಿವೇತನಕ್ಕೆ (Scholarship) ಸಂಬಂಧಪಟ್ಟಂತೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಕಟ್ಟಡ ಮತ್ತು ಕೂಲಿ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ (Subsidy) ಪಡೆದುಕೊಳ್ಳಲು ಮತ್ತೆ ಅವಕಾಶ ಕಲ್ಪಿಸಿಕೊಡಲಾಗಿದೆ.
SSP ಅರ್ಜಿ ಸಲ್ಲಿಕೆ
ಸರ್ಕಾರದ ವಿವಿಧ ಇಲಾಖೆಯ ಮೂಲಕ ರಾಜ್ಯ ವಿದ್ಯಾರ್ಥಿ ತಂತ್ರಾಂಶದ ಅಡಿಯಲ್ಲಿ ಶೈಕ್ಷಣಿಕ ಸಹಾಯಧನಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ ಎಂದು ಸರ್ಕಾರ ತಿಳಿಸಿದೆ. ಅಂದರೆ ಈಗಾಗಲೇ ಅರ್ಜಿ ಸಲ್ಲಿಕೆ ಮಾಡಿರುವವರಿಗೆ ಪ್ರಸಕ್ತ ಸಾಲಿನ ಶೈಕ್ಷಣಿಕ ಸಹಾಯಧನ ಮತ್ತೆ ಸಿಗಲಿದೆ ಎಂದು ತಿಳಿಸಲಾಗಿದೆ.
ಇನ್ನು ಶೈಕ್ಷಣಿಕ ಸಹಾಯ ಧನಕ್ಕಾಗಿ ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ನವೆಂಬರ್ 30ರವರೆಗೆ ಅವಕಾಶವಿದೆ. ಕಳೆದ ಮಾರ್ಚ್ ಮೂರಕ್ಕೆ ಕೊನೆಗೊಳ್ಳಬೇಕಾಗಿದ್ದ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ನವೆಂಬರ್ 30ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಜ್ಯ ವಿದ್ಯಾರ್ಥಿವೇತನ (Scholarship) ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ನೇರವಾಗಿ ಶೈಕ್ಷಣಿಕ ಸಹಾಯಧನವನ್ನು ಪಡೆದುಕೊಳ್ಳಬಹುದು. ಒಮ್ಮೆ ಅರ್ಜಿ ಸಲ್ಲಿಸಿದರೆ ಪುನಃ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ ಎಂಬುದನ್ನು ಸ್ಪಷ್ಟವಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶೈಕ್ಷಣಿಕ ಸಹಾಯಧನ ನೀಡುವ ಅಂತಿಮ ತೀರ್ಮಾನವು ಕಾರ್ಮಿಕ ಮಂಡಳಿಯದ್ದೇ ಆಗಿರುತ್ತದೆ. ಕಟ್ಟಡ ನಿರ್ಮಾಣ ಮತ್ತು ಕಾರ್ಮಿಕರ ಮಕ್ಕಳು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಸರ್ಕಾರದಿಂದ ಸಿಗುವ ಸಹಾಯಧನದ ನೆರವು ಪಡೆದುಕೊಳ್ಳಲು ಇದು ಸಕಾಲ.