Rishab Shetty: ಇದೊಂದು ಕಾರಣಕ್ಕೆ ವಿಶ್ವಸಂಸ್ಥೆಯಲ್ಲಿ ರಿಷಬ್ ಭಾಷಣ 12 ಸೆಕೆಂಡಿಗೆ ಸ್ಥಗಿತ.

Advertisement
ನಟ ನಿರ್ದೇಶಕ ರಿಷಬ್ ಶೆಟ್ಟಿ (Rishab Shetty)ಯವರು ನಿನ್ನೆ (ಮಾರ್ಚ್ 16) ನಡೆದ ವಿಶ್ವಸಂಸ್ಥೆಯ (UN Annual Meeting) ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಪರಿಸರ ಸಂರಕ್ಷಣೆ ಕುರಿತು ಕನ್ನಡದಲ್ಲಿಯೇ ಮಾತನಾಡಿದ್ದಾರೆ. ಹೌದು ತಮ್ಮ ಭಾಷಣವನ್ನು ಟ್ವಿಟ್ಟರ್ (Twitter) ಖಾತೆಯಲ್ಲಿಯೂ ರಿಷಬ್ ಹಂಚಿಕೊಂಡಿದ್ದಾರೆ.
ಇನ್ನು ಕಳೆದ ಕೆಲ ದಿನಗಳಿಂದ ಜಾಗತಿಕ ಸಮಸ್ಯೆಗಳನ್ನು ವಿಶ್ವಸಂಸ್ಥೆ ತನ್ನ ವಾರ್ಷಿಕ ಸಭೆಯಲ್ಲಿ ಚರ್ಚಿಸುತ್ತಿದ್ದುಬವಿಶ್ವದ ಹತ್ತು ಹಲವು ದೇಶಗಳ ನಾಯಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇನ್ನು ಸಮಸ್ಯೆಗಳ ಸರಮಾಲೆಯನ್ನು ಬಿಚ್ಚಿಡುತ್ತಿದ್ದು ಅದೇ ರೀತಿಯಾಗಿ ಕರ್ನಾಟಕದಿಂದ ಕಾಂತಾರ ಚಿತ್ರದ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಸಹ ಈ ವಾರ್ಷಿಕ ಸಭೆಯಲ್ಲಿ ಭಾಗವಹಿಸಿದ್ದಾರೆ.
ರಿಷಬ್ ಶೆಟ್ಟಿಯ ಕನ್ನಡ ಭಾಷಣ :
ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತ ಹೆಚ್ಚು ಅವಧಿಯಿಂದ ತಳಮಟ್ಟ ದಿಂದ ಕಾರ್ಯನಿರ್ವಹಿಸುತ್ತಿರುವ ಭಾರತದ ಏಕೋಪಾಸ್ ಪ್ರತಿನಿಧಿಯಾಗಿ ನಾನು ಬಂದಿದ್ದೇನೆ. ಪರಿಸರ ಸುಸ್ಥಿರತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ- ನಿರ್ದೇಶಕನಾಗಿ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದೇ ನನ್ನ ಉದ್ದೇಶ. ಪರಿಸರ ಸುಸ್ಥಿರತೆಯ ಶೋಧನೆಗೆ ಜಾಗತಿಕ ಏಜೆನ್ಸಿಗಳು ಹಾಗೂ ಸರ್ಕಾರದ ಸಂಸ್ಥೆಗಳು ಮುಂಚೂಣಿಯಲ್ಲಿವೆ.
ಜೊತೆಗೆ ಭಾರತದಲ್ಲಿ ನಾಗರಿಕ ಸಮಾಜ ಕೂಡ ಸ್ಥಳೀಯ ಪರಿಸರ ರಕ್ಷಣೆಯ ಕಾರ್ಯದಲ್ಲಿ ತೊಡಗಿದೆ. ಇಂತಹ ಪರಿಸರ ಪ್ರಜ್ಞೆಗೆ ಸಿನಿಮಾ ಎಂಬ ಮಾಧ್ಯಮವು ಕನ್ನಡಿ ಹಿಡಿಯುತ್ತದೆ ಹಾಗೂ ವಾಸ್ತವವನ್ನು ಜಗತ್ತಿಗೆ ತೋರಿಸುವ ಪ್ರಮುಖ ಪಾತ್ರ ನಿರ್ವಹಿಸುತ್ತವೆ ಹಲವಾರು ಭಾರತೀಯ ಸಿನಿಮಾಗಳು ಕಾಲ್ಪನಿಕ ಹಾಗೂ ವಾಸ್ತವ ಕತೆಗಳ ಮೂಲಕ ಪರಿಸರ ಸಂರಕ್ಷಣೆಯ ವಿಚಾರ ಹೇಳಿದ್ದು ಈ ಕುರಿತು ಜಾಗೃತಿ ಮೂಡಿಸಿವೆ ಎಂಬುದು ನಮ್ಮ ಹೆಮ್ಮೆ.
Advertisement
ಇನ್ನು ಇತ್ತೀಚಿನ ನನ್ನ ಕಾಂತಾರ ಸಿನಿಮಾದಲ್ಲಿ ಸಹ ನಿಸರ್ಗದ ಮಡಿಲಲ್ಲಿ ಮನುಷ್ಯನ ಜೀವನ ಜನರ ಸ್ಥಳೀಯ ನಂಬಿಕೆ ಆಚರಣೆ ಕುರಿತ ಪ್ರಮುಖ ಅಂಶಗಳು ಅಡಕವಾಗಿವೆ. ಪರಿಸರದ ಜತೆ ನಾವು ಹೊಂದಿರುವ ನಂಟು ಅದು ನಮ್ಮ ಮೇಲೆ ಬೀರುವ ಪರಿಣಾಮ ಸಹಬಾಳ್ವೆ ಸಾಂಸ್ಕೃತಿಕ ಹಿರಿಮೆಗಳು ಹೇಗೆ ಪರಸ್ಪರ ಅವಲಂಬಿಸಿದೆ ಎಂಬುದನ್ನು ಕಾಂತಾರ ಸಿನಿಮಾ ತೋರಿಸಿದೆ.
ಸ್ಥಳೀಯ ಪರಿಸರ ರಕ್ಷಣೆ ಇದರಲ್ಲಿ ಸರ್ಕಾರದ ಪಾತ್ರ ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಮುದಾಯಗಳ ಪ್ರಾಮುಖ್ಯತೆಗಳನ್ನು ಸಿನಿಮಾ ಎಳೆಎಳೆಯಾಗಿ ಬಿಚ್ಚಿಟ್ಟಿದೆ.ಕಾಂತಾರದಂತಹ ಸಿನಿಮಾಗಳು ವಾಸ್ತವವನ್ನು ತೆರೆದಿಡುವ ಜತೆಗೆ ಪರಿಸರದ ಸವಾಲುಗಳನ್ನು ಎದುರಿಸಲು ಸಮಸ್ಯೆಗಳನ್ನು ಬಗೆಹರಿಸಲು ಜನರಿಗೆ ಸ್ಫೂರ್ತಿ ನೀಡುತ್ತವೆ. ಭಾವನೆಗಳನ್ನು ಜಾಗೃತಗೊಳಿಸಿ ಪರಿಸರ ರಕ್ಷಣೆಯತ್ತ ಜನ ತೆರಳುವಂತೆ ಮಾಡುತ್ತವೆ. ಇಂತಹ ಪ್ರಯತ್ನ ಪರಿಶ್ರಮವನ್ನು ಗುರುತಿಸಬೇಕು ಪ್ರೋತ್ಸಾಹಿಸಬೇಕು ಎಂಬುದಾಗಿ ಇಲಿ ನೆರೆದಿರುವ ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇನೆ.. ಎಂದಿದ್ದಾರೆ ರಿಷಬ್
ಆದರೆ ಅಚ್ಚರಿ ವಿಚಾರ ಏನೆಂದರೆ ರಿಷಬ್ ಶೆಟ್ಟಿ ಭಾಷಣವನ್ನ ವಿಶ್ವಸಂಸ್ಥ ಅರ್ಧಕ್ಕೆ ತಡ ಹಿಡಿದಿದೆ.. ಅದು ಯಾಕೆ ಎಂದು ನೋಡುವುದಾದರೆ ಸಾಮಾನ್ಯವಾಗಿ ಈ ಸಭೆಯಲ್ಲಿ ಮಾತನಾಡಲಿ ಒಬ್ಬ ವ್ಯಕ್ತಿಗೆ ಒಂದು ವರೆ ನಿಮಿಷ ಅವಕಾಶ ಮಾತ್ರ ನೀಡಲಾಗಿತ್ತದೆ. ಇಷ್ಟರಲ್ಲೇ ತಮ್ಮ ವಿಚಾರವನ್ನು ತಲುಪಿಸಬೇಕು. ಇಲ್ಲಿ ಯಾವುದೇ ಭಾಷೆಯಲ್ಲಿ ಕೂಡ ಮಾತನಾಡಬಹುದು. ವಿಶ್ವಸಂಸ್ಥೆಯ ಅನುಮೋದಿತ ಭಾಷೆಗಳಿಗೆ ಅದನ್ನ ಟ್ರಾನ್ಸ್ ಲೇಟ್ ಮಾಡಲಾಗುತ್ತದೆ.
ಇಲ್ಲಿ ಬರುವ ಬಹುತೇಕರು ಇಂಗ್ಲೀಷ್ ನಲ್ಲಿ ಮಾತನಾಡುತ್ತಾರೆ ಆದರೆ ರಿಷಬ್ ಕನ್ನಡದಲ್ಲಿ ಮಾತನಾಡಿ ಹೆಮ್ಮೆ ತಂದಿದ್ದಾರೆ. ಯಾವುದೇ ಅಣಕು ಹಾಗೂ ಭಯವಿಲ್ಲದೇ ಭಾಷಣ ಪ್ರಾರಂಭಸಿದ ರಿಷಬ್ ಸಮಯ ಕಡಿಮೆ ಇರುವ ಕಾರಣ ವೇಗವಾಗಿ ಭಾಷಣ ಮಾಡುತ್ತಿದ್ದರು. ಆದರೆ ಅವರು ವೇಗವಾಗಿ ಮಾತನಾಡುತ್ತಿದ್ದ ಕಾರಣ ಅವರ ಮಾತು ಬೇರೆ ಬಾಷೆಗಳಿಗೆ ಟ್ರಾನ್ಸ್ ಲೇಟ್(Translate) ಆಗಲಿಲ್ಲ.
ಆದ ಕಾರಣ ಅವರ ಬಾಷಣವನ್ನ ಅರ್ಧಕ್ಕೆ ಮೊಟುಕುಗೊಳಿಸಲಾಯಿತು. ನಂತರ ವಿಚಾರ ತಿಳಿದ ರಿಷನ್ ಕ್ಷಮೆ ಕೂಡ ಕೋರುತ್ತಾರೆ. ಆದರೆ ಟ್ರಾನ್ಸ್ ಲೇಟ್ ಆಗದ ಕಾರಣ ರಿಷಬ್ ಬಾಷಣ ನಿಲ್ಲಿಸಿ ಬೇರೆ ಸ್ಪೀಕರ್ ಗೆ ಅವಕಾಶ ಮಾಡಿಕೊಡಲಾಗುತ್ತದೆ. ಆದರೆ ಸಿಕ್ಕ ಸಮದಲ್ಲಿ ರಿಷಬ್ ತಮ್ಮ ವಿಚಾರವನ್ನು ತಲುಪಿಸಿ ಕನ್ನಡದಲ್ಲಿ ಮಾತನಾಡಿ ಕನ್ನಡಕ್ಕೆ ಹೆಮ್ಮೆ ತಂದಿದ್ದಾರೆ ಎನ್ನಬಹುದು.
Advertisement