Aadhaar Card: ಆಧಾರ್ ಕಾರ್ಡ್ ಹೊಂದಿದವರಿಗೆ ಇಲ್ಲಿದೆ ನೋಡಿ ದೊಡ್ಡ ಬಿಗ್ ನ್ಯೂಸ್! ಕೇಂದ್ರ ಸರ್ಕಾರದ ಅಧಿಕೃತ ಘೋಷಣೆ
ನಮ್ಮ ಭಾರತ ದೇಶ ನಿಮಗೆಲ್ಲರಿಗೂ ತಿಳಿದಿರಬಹುದು ಒಂದು ಕಾಲದಲ್ಲಿ ತೃತೀಯ ವರ್ಗದ ದೇಶ ಎಂಬುದಾಗಿ ಕರೆಯಲ್ಪಡುತ್ತಿತ್ತು. ಆದರೆ ಇವತ್ತು ಇಡೀ ವಿಶ್ವದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಶಕ್ತಿ ಎನ್ನುವಂತಹ ಹೆಗ್ಗಳಿಕೆಗೆ ಪಾತ್ರವಾಗಿದೆ. ಹಾಗಿದ್ರೂ ಕೂಡ ನಮ್ಮ ಭಾರತ ದೇಶದಲ್ಲಿ ಬಡತನ ಹಾಗೂ ನಿರುದ್ಯೋಗದ ಸಮಸ್ಯೆಯಿಂದಾಗಿ ಆರ್ಥಿಕ ದುರ್ಬಲತೆಯನ್ನು ಕಂಡಿರುವಂತಹ ಹಾಗೂ ಕಾಣುತ್ತಿರುವ ಜನರು ಸಾಕಷ್ಟು ಇದ್ದಾರೆ. ಇವರಿಗಾಗಿ ಸರ್ಕಾರ ಒಂದಲ್ಲ ಒಂದು ಯೋಜನೆಯನ್ನು ಜಾರಿಗೆ ತರುತ್ತಲೇ ಇರುತ್ತದೆ. ಇದೇ ರೀತಿ ಕಾರ್ಮಿಕ ವರ್ಗದ ಕೆಟ್ಟ ಪರಿಸ್ಥಿತಿಯನ್ನು ಗಮನಿಸಿರುವ ಕೇಂದ್ರ ಸರ್ಕಾರ ಈಗ ಒಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಬನ್ನಿ ಅದರ ಬಗ್ಗೆ ಇವತ್ತಿನ ಈ ಲೇಖನದ ಮಾಧ್ಯಮದ ಮೂಲಕ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳೋಣ.
E-Shram Portal Yojana:
ಕೇಂದ್ರ ಸರ್ಕಾರ ಇಶ್ರಾಮ್ ಪೋರ್ಟಲ್ ಯೋಜನೆ (E Shram Portal Yojana) ಯ ಮೂಲಕ ಆಧಾರ್ ಕಾರ್ಡ್ (Aadhaar Card) ಇರುವಂತಹ ಜನರಿಗೆ 1000 ಆರ್ಥಿಕ ಸಹಾಯವನ್ನು ನೀಡುವಂತಹ ಯೋಜನೆಯ ಜಾರಿಗೆ ತಂದಿದೆ ಎಂಬುದಾಗಿ ತಿಳಿದು ಬಂದಿದೆ. ಈಗಾಗಲೇ ಈ ಯೋಜನೆ ಅಡಿಯಲ್ಲಿ 14 ಕೋಟಿಗೂ ಹೆಚ್ಚಿನ ಭಾರತೀಯರು ನೋಂದಾವಣೆ ಮಾಡಿಕೊಂಡಿದ್ದು ನೀವು ಈ ಪೋರ್ಟಲ್ ಮೂಲಕ ನೋಂದಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಈ ಯೋಜನೆಯ ಅಡಿಯಲ್ಲಿ 2 ಲಕ್ಷ ರೂಪಾಯಿಗಳ ಆಕ್ಸಿಡೆಂಟಲ್ ಇನ್ಸೂರೆನ್ಸ್ (Accidental Insurance) ಅನ್ನು ಕೂಡ ಪಡೆದುಕೊಳ್ಳಬಹುದಾಗಿದೆ.
ಕೇಂದ್ರ ಸರ್ಕಾರ ವಿಶೇಷವಾಗಿ ಕಾರ್ಮಿಕರಿಗೆ ಆರ್ಥಿಕ ಪರಿಸ್ಥಿತಿಯನ್ನು ಇನ್ನಷ್ಟು ಸುಧಾರಿಸಿಕೊಳ್ಳುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿದೆ ಎಂಬುದಾಗಿ ತಿಳಿದು ಬಂದಿದ್ದು ಕಾರ್ಮಿಕರು ಮೊಬೈಲ್ ಮೂಲಕವೇ ಇದನ್ನು ರಿಜಿಸ್ಟರ್ ಮಾಡಿಕೊಳ್ಳುವಂತಹ ಪ್ರಕ್ರಿಯೆಯನ್ನು ಪ್ರಾರಂಭಿಸಬಹುದಾಗಿದೆ.
ಮೊದಲಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಿಮ್ಮ ಮೊಬೈಲ್ ನಂಬರ್ ಗೆ ಹಾಗೂ ಈ ಪೋರ್ಟಲ್ ಗೆ ಲಿಂಕ್ ಮಾಡಿಕೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ. ಈನಂತರ ನೀವು ಈ ಯೋಜನೆಯ ಮೂಲಕ ಸಾವಿರ ರೂಪಾಯಿಗಳ ಆರ್ಥಿಕ ಸಹಾಯವನ್ನು ನಿರಂತರವಾಗಿ ಪಡೆದುಕೊಳ್ಳಬಹುದಾಗಿದೆ.
ಕೇಂದ್ರ ಸರ್ಕಾರ ಇದೆ ರೀತಿಯಲ್ಲಿ ಅಸಂಘಟಿತವಾಗಿರುವಂತಹ ಕಾರ್ಮಿಕರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು ಇದು ಕೂಡ ಒಂದು ಪ್ರಮುಖ ಯೋಜನೆಯಾಗಿದೆ. ಒಂದು ಸಾವಿರ ರೂಪಾಯಿಗಳ ಆರ್ಥಿಕ ಸಹಾಯದ ಜೊತೆಗೆ ಎರಡು ಲಕ್ಷ ರೂಪಾಯಿಗಳ ಆಕ್ಸಿಡೆಂಟಲ್ ಇನ್ಸೂರೆನ್ಸ್ (Accidental Insurance) ಅನ್ನು ಕೂಡ ನೀವು ಯೋಜನೆಯ ಮೂಲಕ ಪಡೆದುಕೊಳ್ಳಬಹುದಾಗಿದೆ. ಈ ಮೂಲಕ ಕಾರ್ಮಿಕರನ್ನು ಕೂಡ ಸಮಾಜದ ಮುಖ್ಯ ಭೂಮಿಗೆ ತರುವತ್ತ ನರೇಂದ್ರ ಮೋದಿ (Narendra Modi) ಅವರ ಕೇಂದ್ರ ಸರ್ಕಾರ ತನ್ನ ಕೊಡುಗೆಯನ್ನು ನೀಡುತ್ತಿದೆ.