Drought Relief Money: ಬರಪರಿಹಾರದ ಹಣಕ್ಕೆ ಕಾದು ಕುಳಿತಿದ್ದ ಎಲ್ಲರಿಗೂ ಸುಪ್ರೀಂ ಕೋರ್ಟ್ ನಿಂದ ಸಿಹಿಸುದ್ದಿ!
ಒಂದಲ್ಲ ಒಂದು ವಿಚಾರಗಳು ರಾಜ್ಯದಲ್ಲಿ ಕಾಣಿಸಿಕೊಂಡ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ (Supreme Court) ಮಧ್ಯಕ್ಕೆ ಬಂದು ಅದರ ಪರಿಹಾರವನ್ನು ನೀಡುವಂತಹ ಪ್ರಯತ್ನಗಳನ್ನು ಮಾಡುತ್ತದೆ. ಅದೇ ರೀತಿಯಲ್ಲಿ ಈಗ ಕರ್ನಾಟಕ ಸರ್ಕಾರಕ್ಕೆ ಸಿಗಬೇಕಾಗಿರುವಂತಹ ಬರ ಪರಿಹಾರದ ಬಗ್ಗೆ ಕೂಡ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಗುಡ್ ನ್ಯೂಸ್ ನೀಡಿದೆ.
ಕರ್ನಾಟಕ ಸರ್ಕಾರದಿಂದ ಬರ ಪರಿಹಾರಕ್ಕಾಗಿ ಅರ್ಜಿ:
ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ ಬರ ಪರಿಹಾರವನ್ನು (Drought Relief ) ಕೊಡಿಸುವಂತೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಈ ಹಿಂದೆ ಅರ್ಜಿ ಸಲ್ಲಿಸಿತ್ತು. ಈ ರೀತಿ ಕೇಂದ್ರ ಸರ್ಕಾರದಿಂದ ಬಾರ ಪರಿಹಾರ ಬರದೆ ಹೋದಲ್ಲಿ ರಾಜ್ಯ ಸರ್ಕಾರಗಳು ಈ ರೀತಿ ಸುಪ್ರೀಂಕೋರ್ಟ್ (Supreme Court) ಮೊರೆ ಹೋಗಬೇಕಾಗುತ್ತದೆ. ಅದೇ ರೀತಿಯಲ್ಲಿ ರಾಜ್ಯ ಸರ್ಕಾರ ಕೂಡ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ಕರ್ನಾಟಕ ರಾಜ್ಯ ಸರ್ಕಾರದ ಪರವಾಗಿ ಕಪಿಲ್ ಸಿಬಲ್ ವಾದ:
ಕರ್ನಾಟಕ ರಾಜ್ಯ ಸರ್ಕಾರದ ಪರವಾಗಿ ತಮ್ಮ ವಾದವನ್ನು ಮಂಡಿಸುತ್ತಾ ಕಪಿಲ್ ಸಿಬಲ್ ಅವರು ಕರ್ನಾಟಕ ಸರ್ಕಾರಕ್ಕೆ ಸಿಗಬೇಕಾಗಿರುವಂತಹ ಬರ ಪರಿಹಾರದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಕಳೆದ ಡಿಸೆಂಬರ್ ತಿಂಗಳಿನಲ್ಲಿ ಇದರ ಬಗ್ಗೆ ಅರ್ಜಿ ಸಲ್ಲಿಸಲಾಗಿತ್ತು ಆದರೆ ಕೇಂದ್ರ ಸರ್ಕಾರದಿಂದ ಯಾವುದೇ ಬರ ಪರಿಹಾರ (Drought Relief Money) ಬಂದಿಲ್ಲ ಎಂಬುದಾಗಿ ಅವರು ಹೇಳಿಕೊಂಡಿದ್ದಾರೆ.
ಇಷ್ಟೆಲ್ಲಾ ಅರ್ಜಿಯನ್ನು ಸಾಧಿಸಿದ ನಂತರವೂ ಕೂಡ ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕಾಗಿರುವ ಬರ ಪರಿಹಾರವನ್ನು ಬಿಡುಗಡೆ ಮಾಡಿಲ್ಲ ಎಂಬುದಾಗಿ ಹೇಳಿಕೊಂಡಿದೆ. ಈ ಪ್ರಕರಣದ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಯಾವ ತೀರ್ಪನ್ನು ನೀಡಿದೆ ಎನ್ನುವಂತಹ ಮಾಹಿತಿಯನ್ನು ಪಡೆದುಕೊಳ್ಳೋಣ ಬನ್ನಿ.
ಕರ್ನಾಟಕದ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು:
ಎಲ್ಲಾ ವಿಚಾರಗಳಿಗಾಗಿ ರಾಜ್ಯಗಳು ಸುಪ್ರೀಂಕೋರ್ಟಿಗೆ ಬರಬೇಕಾ ಅನ್ನೋದಾಗಿ ಕೇಂದ್ರ ಸರ್ಕಾರಕ್ಕೆ ಕಾರ ಮುಟ್ಟಿಸುವ ರೀತಿಯಲ್ಲಿ ಹೇಳಿಕೊಂಡಿದೆ. ಈ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ಕೇಂದ್ರ ಸರ್ಕಾರದ ನಿಲುವಿನ ಬಗ್ಗೆ ತಮ್ಮ ಅಸಮಾಧಾನವನ್ನು ಪರೋಕ್ಷವಾಗಿ ಹೊರಹಾಕಿದೆ ಎಂದು ಹೇಳಬಹುದಾಗಿದೆ. ಹೀಗಾಗಿ ಈ ವಿಚಾರದ ಬಗ್ಗೆ ತೀರ್ಪನ್ನು ನೀಡಿರುವಂತಹ ಸುಪ್ರೀಂ ಕೋರ್ಟ್ ಎರಡು ವಾರದಲ್ಲಿ ನಿಮ್ಮ ಖಾತೆಗೆ ಸೇರಬೇಕಾಗಿರುವಂತಹ ಬರ ಪರಿಹಾರದ ಹಣವನ್ನು ನಿಮಗೆ ವರ್ಗಾವಣೆ ಮಾಡಲಾಗುತ್ತದೆ ಎನ್ನುವುದಾಗಿ ಆಶ್ವಾಸನೆ ನೀಡಿದೆ.
ಕೊನೆಗೂ ಕೇಂದ್ರ ಸರ್ಕಾರದ ವಿಚಾರದಲ್ಲಿ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸಿಗಬೇಕಾಗಿರುವಂತಹ ಬರ ಪರಿಹಾರವನ್ನು ನೀಡಿದೆ ಎಂದು ಹೇಳಬಹುದಾಗಿದೆ. ಕರ್ನಾಟಕದ ಜನತೆಗೆ ಈ ಸಂದರ್ಭದಲ್ಲಿ ಖಂಡಿತವಾಗಿ ಇದೊಂದು ಗುಡ್ ನ್ಯೂಸ್ ಅನ್ನೋದ್ರಲ್ಲಿ ಯಾವುದೇ ಅನುಮಾನವಿಲ್ಲ.