ಇದೀಗ ಭೂ ಮಾರಾಟ ಮಾಡುವ ಜಮೀನುದಾರನಿಗೆ ಸರಕಾರ ಶಾಕಿಂಗ್ ನ್ಯೂಸ್ ಒಂದನ್ನು ನೀಡಿದೆ. ಹೌದು ಐದು ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಕೃಷಿ ಭೂಮಿ (Agricultural Land) ಯನ್ನು ಮಾರಾಟ ಮಾಡಬಾರದು ಎನ್ನುವ ನಿಯಮ ವನ್ನು ಸರಕಾರ ಜಾರಿ ಮಾಡಿದೆ. ಕನಿಷ್ಠ 5 ಗುಂಟೆ ಇರುವ ಜಮೀನು ಮಾರಾಟ ಬಹಳಷ್ಟು ಸಮಸ್ಯೆ ಯಾಗುತ್ತಿದ್ದು ಕೃಷಿ ಭೂಮಿಗೂ ತೊಂದರೆಯಾಗುತ್ತಿದೆ.
ಹಾಗಾಗಿ ಭೂಕಂದಾಯ ಅಧಿನಿಯಮ 1964 ರ 108 ರಡಿ ಕೃಷಿ ಉದ್ದೇಶಕ್ಕಾಗಿ ಬಳಸಲಾಗುವ ಭೂಮಿಯನ್ನು ಕನಿಷ್ಠ ವಿಸ್ತೀರ್ಣ ಹೊಂದಿರುವ ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಭೂ ದಾಖಲೆಗಳ ಇಲಾಖೆ ಆದೇಶದಲ್ಲಿ ವಿನಾಯಿತಿ ನೀಡಲಾಗಿದ್ದು, ಈ ನಾಲ್ಕು ಜಿಲ್ಲೆಗಳಲ್ಲಿ 3 ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಕೃಷಿ ಭೂಮಿ ಮಾರಾಟ ಮಾಡಲು ಇಲ್ಲ.ಉಳಿದ ಜಿಲ್ಲೆಗಳಲ್ಲಿ ಕನಿಷ್ಠ 5 ಗುಂಟೆಗೆ ಸರ್ಕಾರ ನಿಗದಿ ಮಾಡಿದೆ.
ಹಾಗಾಗಿ 5 ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಕೃಷಿ ಭೂಮಿ (Agricultural Land) ಮಾರಾಟ ಮಾಡಲು ಅವಕಾಶವಿಲ್ಲ. ಕೃಷಿ ಉದ್ದೇಶಕ್ಕೆ ಉಪಯೋಗಿಸುವ ಭೂಮಿಯನ್ನು ಕನಿಷ್ಠ ವಿಸ್ತೀರ್ಣಕ್ಕಿಂತ ಕಡಿಮೆ ಇರುವುದು ಬೆಳಕಿಗೆ ಬಂದಿದ್ದು ಇದಕ್ಕೆ ಕಾರಣ ತುಂಡು ತುಂಡು ಭೂಮಿ ಮಾರಾಟ ಅಥವಾ ರೆವಿನ್ಯೂ ಬಡಾ ವಣೆ ನಿರ್ಮಾಣ ಮಾಡಿ ಮಾರಾಟ ಮಾಡುತ್ತಿರುವುದು ಕೂಡ ಪ್ರಮುಖ ಕಾರಣ
ಕೃಷಿ ಭೂಮಿಗೆ ತೊಂದರೆ!
ಕೃಷಿ ಮಾಡುವ ಭೂಮಿಯನ್ನು ಸೈಟು,ಕಟ್ಟಡ ನಿರ್ಮಾಣ ಮಾಡಲು ಬಳಸಲಾಗ್ತ ಇದ್ದು ಕೃಷಿ ಭೂಮಿ (Agricultural Land) ಯನ್ನು ತುಂಡು ಭೂಮಿಯಾಗಿ ಮಾರಾಟ ಮಾಡುತ್ತಿದ್ದಾರೆ. ಹಾಗಾಗಿ ಸಣ್ಣ ತುಂಡು ಭೂಮಿಯಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ಸಾಧ್ಯವಿಲ್ಲ. ಅದಕ್ಕಾಗಿ ಇದನ್ನು ತಡೆಯುವ ಉದ್ದೇಶಕ್ಕೆ 5 ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಭೂಮಿ ಯನ್ನು ಮಾರಾಟ ಮಾಡದಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ.
ಹಾಗಾಗಿ ಹೊಸ ಆದೇಶಕ್ಕೂ ಮೊದಲು ಸರ್ವೆ ನಂಬರ್ ಅಥವಾ ಪಹಣಿಗಳಲ್ಲಿ ಕನಿಷ್ಠ ವಿಸ್ತೀರ್ಣ ಗಿಂತ ಕಡಿಮೆ ವಿಸ್ತೀರ್ಣ ಇದ್ದರೆ ಸಮಸ್ಯೆಇಲ್ಲ. ಅಂತಹ ಸರ್ವೆ ನಂಬರ್ ಮತ್ತು ಪಹಣಿಗಳು ಕಾರ್ಯ ನಿರ್ವಹಿಸಲಿದೆ. ಒಂದು ವೇಳೆ ಉಳಿದ 5 ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಕೃಷಿ ಜಮೀನನ್ನು ಮಾರಾಟ ಮಾಡಿದರೆ ಇ ನಕ್ಷೆ ದೊರೆ ಯುವುದಿಲ್ಲ ಎಂಬ ಆದೇಶವನ್ನು ಸರಕಾರ ನೀಡಿದೆ.