ಸರಕಾರವು ರೈತರಿಗಾಗಿ ಹಲವು ರೀತಿಯ ಯೋಜನೆಗಳನ್ನು ಜಾರಿ ಮಾಡ್ತಾ ಇದೆ.ಹೌದು ರೈತರು ಆರ್ಥಿಕ ವಾಗಿ ಅಭಿವೃದ್ಧಿಯಾಗ ಬೇಕು, ಕೃಷಿಯಲ್ಲಿ ಮತ್ತಷ್ಟು ಪ್ರಗತಿ ಕಾಣಬೇಕು ಎನ್ನುವ ನಿಟ್ಟಿನಲ್ಲಿ ಸರಕಾರ ವಿವಿಧ ಯೋಜನೆಯನ್ನು ರೂಪಿಸುತ್ತಿದೆ. ಹಾಗೆಯೇ ಬಗರ್ ಹುಕುಂ (Bagar Hukum) ಸಾಗುವಳಿ ರೈತರಿಗೆ ಸರ ಕಾರ ಇದೀಗ ಗುಡ್ ನ್ಯೂಸ್ ಅನ್ನು ನೀಡಿದೆ. ಬಗರ್ ಹುಕುಂ ಸಾಗುವಳಿ ರೈತರಿಗೆ ಇದ್ದಂತಹ ಜಮೀನಿನಿಂದ ಹೊರಬರಲು ಹೇಳುವುದಿಲ್ಲ. ಯಾವುದೇ ರೈತರು ಧೃತಿ ಗೆಡ ಬಾರದು ಎಂದು ಸಚಿವರು ತಿಳಿಸಿದ್ದಾರೆ.
ಈಗಾಗಲೇ ಸರಕಾರವು ರೈತರಿಗೆ ಯಾವುದೇ ತೊಂದರೆ ಯಾಗ ಬಾರದು ಎನ್ನುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿಗೆ ಒಪ್ಪಿಗೆ ನೀಡಿಲ್ಲ. ಸರಕಾರ ಬಗರ್ ಹುಕುಂ (Bagar Hukum) ಸಾಗುವಳಿದಾರರ ಪರವಾಗಿ ಸರ್ಕಾರ ಕೆಲಸ ಮಾಡುತ್ತಿದ್ದು 2015 ರೊಳಗೆ 3 ಎಕರೆ ಒಳಗೆ ಸಾಗುವಳಿ ಮಾಡುತ್ತಿರುವ ರೈತರಿಗೆ ಯಾವುದೇ ರೀತಿಯ ನೋಟಿಸ್ ನೀಡುವುದು, ತೊಂದರೆ ನೀಡದಂತೆ ಅರಣ್ಯ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ.
ಅರ್ಜಿಗಳ ವಿಲೇವಾರಿ!
ಇನ್ನು ನಿಗದಿತ ಅವಧಿಯಲ್ಲಿ ಬಗರ್ ಹುಕುಂ (Bagar Hukum) ಅರ್ಜಿಗಳ ವಿಲೇವಾರಿ ಹಾಗೂ ಅರ್ಹ ರೈತರಿಗೆ ಭೂ ಮಂಜೂರು ಆಗದಿದ್ದರೆ, ತಹಶೀಲ್ದಾರರಿಗೆ ನೋಟೀಸ್ ಜಾರಿಗೊಳಿಸಿ ಸೂಕ್ತ ಕಾನೂನು ಕ್ರಮ ಜರುಗಿಸುವ ಬಗ್ಗೆ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಹಾಗಾಗಿ ಹಲವಾರು ವರ್ಷಗಳಿಂದ ಸರಕಾರಿ ಜಮೀನಿನಲ್ಲಿ ಉಳಿಮೆ ಮಾಡುತ್ತಿರುವಂತಹ ಪ್ರತಿಯೊಬ್ಬ ರೈತರಿಗೂ ಕೂಡ ಬಗರ್ ಹುಕುಂ ಸಾಗುವಳಿ ಪತ್ರ ನೀಡುವ ಬಗ್ಗೆ ಗುಡ್ ನ್ಯೂಸ್ ನೀಡಿದ್ದಾರೆ.
ದಾಖಲೆಗಳ ಪರಿಶೀಲನೆ!
ಈಗಾಗಲೇ ಸಂಬಂಧಪಟ್ಟಂತಹ ದಾಖಲೆಗಳನ್ನು ಪರಿಶೀಲಿಸಲಾಗಿದ್ದು ಅದಕ್ಕೆ ಬೇಕಾದ ರೈತರ ದಾಖಲೆ ಗಳನ್ನು ತಯಾರು ಮಾಡುವಂತಹ ಪ್ರಕ್ರಿಯೆ ಕೈಗೊಳ್ಳ ಲಾಗುತ್ತೆ. ಹಾಗೆ ಯೇ ತುಂಗಾ ನದಿಗೆ ಕಲುಷಿತ ನೀರು ಹೋಗದಂತೆ ಕ್ರಮ ವಹಿಸಲು ಸಮಿತಿ ಕೂಡ ರಚನೆ ಮಾಡ ಲಾಗಿದ್ದು ನದಿ ಸಂರಕ್ಷಣೆಗೆ ಶಾಶ್ವತ ಪರಿಹಾರದ ಕುರಿತು ಪಕ್ಷಾತೀತವಾಗಿ ಕ್ರಮ ಕೈಗೊಳ್ಳಲಾಗುತ್ತೆ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.