Agricultural Pump Set: ನೀರಾವರಿ ಇರುವ ರಾಜ್ಯದ ಎಲ್ಲ ರೈತರಿಗೂ ಸಿಹಿಸುದ್ದಿ, ಕೃಷಿ ಪಂಪ್ ಸೆಟ್ ಗಳಿಗೆ ಹೆಚ್ಚಿನ ವಿದ್ಯುತ್ ಪೂರೈಕೆ!
![](https://karnatakatimes.com/wp-content/uploads/2023/12/Govt-announced-more-power-supply-for-agricultural-pump-sets-to-all-farmers.jpg)
advertisement
ಸರ್ಕಾರವು ರಾಜ್ಯದ ರೈತರ ಅಭಿವೃದ್ಧಿ (Farmers Development) ಗಾಗಿ ನಾನಾ ರೀತಿಯ ರೈತ ಪರಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿವೆ. ಇತ್ತೀಚೆಗಷ್ಟೇ ಸರ್ಕಾರವು ರಾಜ್ಯ ಸರ್ಕಾರವು ರೈತರಿಗೆ ಸಿಹಿ ಸುದ್ದಿ ನೀಡಿದ್ದ ರಾಜ್ಯ ಸರ್ಕಾರವು 4 ಲಕ್ಷ ಕೃಷಿ ಪಂಪ್ಸೆಟ್ (Agricultural Pump Set) ಗಳಿಗೆ ಮೂಲ ಸೌಕರ್ಯ ಕಲ್ಪಿಸಲಾಗುವುದು ಎಂದು ಹೇಳಿದೆ. ಆದರೆ ಈ ಕುರಿತಂತೆ ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ರು ಎನ್ನುವುದಕ್ಕೆ ಉತ್ತರ ಇಲ್ಲಿದೆ.
advertisement
ಸಿಎಂ ಸಿದ್ದರಾಮಯ್ಯನವರ ಪೋಸ್ಟ್ ಏನಿದೆ?
ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯರವರು (CM Siddaramaiah) ತಮ್ಮ ಸೋಶಿಯಲ್ ಮೀಡಿಯಾದಲ್ಲಿ, “ಬರದ ಸಂಕಷ್ಟದ ನಡುವೆಯೂ ರೈತರ ಕೃಷಿ ಪಂಪ್ ಸೆಟ್ (Agricultural Pump Set) ಗಳಿಗೆ 7 ಗಂಟೆಗಳ ವಿದ್ಯುತ್ ಪೂರೈಕೆ ಮಾಡುವ ಮೂಲಕ ನಮ್ಮ ಸರ್ಕಾರವು ನಾಡಿನ ರೈತರ ಹಿತ ಕಾಪಾಡಿದೆ. ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ” ಎಂದಿದ್ದಾರೆ.
advertisement