Karnataka Times
Trending Stories, Viral News, Gossips & Everything in Kannada

Guarantee Scheme: ಮಹಿಳೆಯರಿಗೆ ಮತ್ತೊಂದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ ಕಾಂಗ್ರೆಸ್ ಸರಕಾರ!

advertisement

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮಹಿಳಾ ಪರವಾದ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಇಟ್ಟ ಕಾರಣ ಕಾಂಗ್ರೆಸ್ ಸರಕಾರ ಮಹಿಳೆಯರ ಬೆಂಬಲವನ್ನು ಕೂಡ ಹೆಚ್ಚಾಗಿ ಪಡೆದಿತ್ತು. ಕಾಂಗ್ರೆಸ್ ಗೆದ್ದರೆ ಮಹಿಳೆಯರಿಗೆ ಎರಡು ಸಾವಿರ ನೀಡುವುದಾಗಿ ಮತ್ತು ಬಸ್ ನಲ್ಲಿ ಉಚಿತ ಪ್ರಯಾಣ ಕಲ್ಪಿಸುವುದಾಗಿ ಘೋಷಣೆ ಮಾಡುವ ಮೂಲಕ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿತ್ತು. ಅದೇ ಚುನಾವಣೆ ಯಲ್ಲಿ ಗೆದ್ದ ಬಳಿಕ ಕಾಂಗ್ರೆಸ್ ಸರಕಾರವು ಗ್ಯಾರಂಟಿ ಯೋಜನೆಗಳ (Guarantee Scheme) ಸೌಲಭ್ಯ ವನ್ನು ಜನತೆಗೆ ನೀಡುತ್ತಿದೆ. ಮಹಿಳೆಯರು ಕೂಡ ಈ ಯೋಜನೆಯ ಸದುಪಯೋಗ ಮಾಡಿಕೊಳ್ಳುತ್ತಿದ್ದಾರೆ‌.‌ ಅದೇ ರೀತಿ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿಯು ಕಾಂಗ್ರೆಸ್ ಮಹಿಳೆಯರಿಗಾಗಿ ಮತ್ತೊಂದು ಗುಡ್ ನ್ಯೂಸ್ ನೀಡಿದೆ.

ಈ ಗುಡ್ ನ್ಯೂಸ್ ನೀಡಿದೆ:

ಇದೀಗ ಲೋಕ ಸಭೆ ಚುನಾವಣೆಗೆ ದಿನಾಂಕ ಕೂಡ ನಿಗದಿ ಯಾಗಿದ್ದು ವಿವಿಧ ಪಕ್ಷಗಳು ಜನರ ಓಲೈಕೆ ಮಾಡುತ್ತಿದ್ದಾರೆ. ಅದೇ ರೀತಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಮೀಸಲಾತಿ ನೀಡಲಾಗುವುದು ಎನ್ನುವ ಇನ್ನೊಂದು ಗ್ಯಾರಂಟಿ ಯನ್ನು ನೀಡಿದೆ. ಸರಕಾರಿ ಉದ್ಯೋಗದಲ್ಲಿ ಶೇ.೫೦ ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಮಹಿಳೆಯರಿಗೆ ಭರವಸೆ ನೀಡಿದ್ದಾರೆ.

 

advertisement

Image Source: Medium

 

ಈ ಯೋಜನೆಗಳನ್ನು ಜಾರಿ ಮಾಡಲಿದೆ:

  • ಮಹಾಲಕ್ಷ್ಮಿ ಗ್ಯಾರಂಟಿ ಯೋಜನೆ (Mahalakshmi Guarantee Scheme) ಮೂಲಕ ಪ್ರತಿ ಬಡ ಕುಟುಂಬದ ಒಬ್ಬ ಮಹಿಳೆಗೆ ವಾರ್ಷಿಕವಾಗಿ 1 ಲಕ್ಷ ರೂ. ವರ್ಗಾವಣೆ ಮಾಡಲಾಗುವುದು ಎನ್ನುವ ಭರವಸೆಯನ್ನು ನೀಡಿದೆ.
  • ಇನ್ನು ಶಕ್ತಿ ಕಾ ಸಮ್ಮಾನ್ ಯೋಜನೆ (Shakti Ka Samman Yojana) ಯಡಿಯಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಮಧ್ಯಾಹ್ನದ ಬಿಸಿಯೂಟ ತಯಾರಿಕಾ ಸಿಬ್ಬಂದಿಗೆ ಪ್ರತಿ ತಿಂಗಳ ಗೌರವಧನವನ್ನು ಹೆಚ್ಚು ಮಾಡುವ ಭರವಸೆ ಯನ್ನು ಕೂಡ ಕಾಂಗ್ರೆಸ್ ಸರಕಾರ ಭರವಸೆ ನೀಡಿದೆ.
  • ಇನ್ನು ಮಹಿಳೆಯರ ಒಳಿತಿಗಾಗಿ ದೇಶಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕನಿಷ್ಠ ಒಂದು ಮಹಿಳಾ ವಸತಿ ನಿಲಯವನ್ನು ಪ್ರಾರಂಭ ಮಾಡುದಾಗಿ ತಿಳಿಸಿದೆ.
  • ಅಧಿಕಾರ ಮೈತ್ರಿ ಯೋಜನೆಯ ಮೂಲಕ ಮಹಿಳೆಯರಿಗೆ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಕಾನೂನು ಸಹಾಯಕರನ್ನು ನೇಮಕ ಮಾಡುವ ಕುರಿತೂ ಗುಡ್ ನ್ಯೂಸ್ ನೀಡಿದೆ.
  • ಅದೇ ರೀತಿ ಸರ್ಕಾರಿ ಉದ್ಯೋಗದ ಹೊಸ ನೇಮಕಾತಿಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ನೀಡಲಿದೆ.

advertisement

Leave A Reply

Your email address will not be published.