Narendra Modi: ಹಠ ಮಾಡಿ ಮೋದಿಯನ್ನು ಒಪ್ಪಿಸಿದ ಸಿದ್ದರಾಮಯ್ಯ, ಕರ್ನಾಟಕಕ್ಕೆ ಬೆಳ್ಳಂಬೆಳಿಗ್ಗೆ ಸಿಹಿಸುದ್ದಿ
Karnataka CM meets Modi: ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ನರೇಂದ್ರ ಮೋದಿ(Narendra Modi) ರವರು ಇತ್ತೀಚಿಗಷ್ಟೇ ನಡೆದಿರುವಂತಹ ಲೋಕಸಭಾ ಚುನಾವಣೆಯಲ್ಲಿ ತಮ್ಮ ಎನ್.ಡಿ.ಎ ಒಕ್ಕೂಟದ ಮೂಲಕ ಬಹುಮತದ ವಿಜಯವನ್ನು ಸಾಧಿಸಿದ್ದಾರೆ. ಇನ್ನು ಅಧಿಕಾರಕ್ಕೆ ಬಂದ ಕೂಡಲೇ ಸಾಕಷ್ಟು ಜನಪ್ರಿಯ ಯೋಜನೆಗಳನ್ನು ಕೂಡ ಮತ್ತೊಮ್ಮೆ ಜಾರಿಗೆ ತರುವಂತಹ ಕೆಲಸವನ್ನು ಮಾಡಿರುವಂತಹ ನರೇಂದ್ರ ಮೋದಿ ರವರನ್ನು ನಮ್ಮ ರಾಜ್ಯದ ಮುಖ್ಯಮಂತ್ರಿಗಳಾಗಿರುವಂತಹ ಸಿದ್ದರಾಮಯ್ಯ(Karnataka chief minister Siddaramaiah) ಅವರು ಮೊದಲ ಬಾರಿಗೆ ಭೇಟಿಯಾಗುವಂತಹ ಕೆಲಸವನ್ನು ಮಾಡಿದ್ದು ಇದೆ ಸಂದರ್ಭದಲ್ಲಿ ಖುಷಿ ಪಡುವಂತಹ ವಿಚಾರವನ್ನು ಕೂಡ ನೀಡಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು ಬನ್ನಿ ಆ ವಿಚಾರ ಏನು ಅನ್ನೋದನ್ನ ತಿಳಿಯೋಣ.
ಮೋದಿ ಅವರ ಭೇಟಿಯಿಂದ ರಾಜ್ಯಕ್ಕೆ ಗುಡ್ ನ್ಯೂಸ್ ನೀಡಿದ ಸಿದ್ದರಾಮಯ್ಯ
ದೇಶದ ಪ್ರಧಾನ ಮಂತ್ರಿಗಳಾಗಿರುವಂತಹ ನರೇಂದ್ರ ಮೋದಿ ರವರನ್ನು ಭೇಟಿ ಮಾಡಿರುವಂತಹ ರಾಜ್ಯದ ಮುಖ್ಯಮಂತ್ರಿಗಳಾಗಿರುವ ಸಿದ್ದರಾಮಯ್ಯ ಬೆಂಗಳೂರು ಟ್ರಾಫಿಕ್ ನಿವಾರಣೆಗಾಗಿ ಸುರಂಗ ಮಾರ್ಗ, ಘನತ್ಯಾಜ್ಯವನ್ನು ವಿಲೇವಾರಿ ಮಾಡುವುದಕ್ಕಾಗಿ ಸ್ವಚ್ಛ ಭಾರತ ಅಭಿಯಾನ ಯೋಜನೆ ಅಡಿಯಲ್ಲಿ 2.0 ಸ್ಕೀಮ್ನ ನಿಧಿಯನ್ನು ಜಾರಿಗೊಳಿಸುವಂತೆ ಹಾಗೂ ಮೆಟ್ರೋ ಮೂರನೇ ಹಂತದ ಯೋಜನೆಯ ಅನುಷ್ಠಾನಕ್ಕೆ ತರುವ ಬಗ್ಗೆ ಕೂಡ ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳ ಬಳಿಯಲ್ಲಿ ಮಾತನಾಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
* ಬೆಂಗಳೂರು ಸಿಟಿ ಟ್ರಾಫಿಕ್ ಅನ್ನು ನಿರ್ವಹಣೆ ಮಾಡುವುದಕ್ಕಾಗಿ 60 ಕಿಲೋಮೀಟರ್ಗಳ ಸುರಂಗ ಮಾರ್ಗವನ್ನು 3000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡುವ ಬಗ್ಗೆ ಈಗಾಗಲೇ ಪ್ರಸ್ತಾವನೆ ನೀಡಲಾಗಿದ್ದು ಈ ವಿಚಾರದ ಬಗ್ಗೆ ಕೂಡ ಗಮನ ವಹಿಸುವಂತೆ ಮೋದಿ ಅವರಿಗೆ ಕೋರಿಕೊಳ್ಳಲಾಗಿದೆ.
* ಮೂರನೇ ಹಂತದ ಮೆಟ್ರೋ ನಿರ್ಮಾಣ ಕಾರ್ಯದ 15611 ಕೋಟಿ ರೂಪಾಯಿಗಳ ಅಗತ್ಯತೆಯನ್ನು ಕೂಡ ಈ ಸಂದರ್ಭದಲ್ಲಿ ಮೋದಿ ಅವರ ಮುಂದೆ ಇಡಲಾಗಿದ್ದು ಈ ವಿಚಾರದ ಬಗ್ಗೆ ಕೂಡ ಗಮನ ಹರಿಸುವಂತೆ ಕೋರಿ ಕೊಳ್ಳಲಾಗಿದೆ.
* 2021 ರಿಂದ 26ರ ವರೆಗಿನ ಕೆರೆಗಳ ಅಭಿವೃದ್ಧಿಗಾಗಿ 6,000 ಕೋಟಿ ರೂಪಾಯಿಗಳ ಹಣವನ್ನು ಬಿಡುಗಡೆ ಮಾಡುವಂತಹ ಮನವಿಯನ್ನು ಕೂಡ ರಾಜ್ಯ ಸರ್ಕಾರ ಈ ಸಂದರ್ಭದಲ್ಲಿ ಮೋದಿ ಅವರಿಗೆ ನೀಡಿದೆ.
* ಘನ ತ್ಯಾಜ್ಯವನ್ನು ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಕೂಡ ಬೆಂಗಳೂರು ಮಹಾನಗರ ಪಾಲಿಕೆ 3200 ಕೋಟಿ ರೂಪಾಯಿಗಳ ಯೋಜನೆಯನ್ನು ಸಿದ್ಧಪಡಿಸಿದ್ದು ಅದರಲ್ಲಿ ಸ್ವಚ್ಛ ಭಾರತ ಅಭಿಯಾನ 2.0 ಅಡಿಯಲ್ಲಿ ಯೋಜನೆಯ 30 ಪರ್ಸೆಂಟ್ ಅಂದರೆ 960 ಕೋಟಿ ರೂಪಾಯಿಗಳನ್ನು ನೀಡುವಂತ ಕೇಳಿಕೊಳ್ಳಲಾಗಿದೆ.
* ಬೆಂಗಳೂರು ನಗರಕ್ಕೆ ಕುಡಿಯುವ ನೀರು ಹಾಗೂ ವಿದ್ಯುತ್ ಪೂರೈಕೆಯ ನೆಲೆಗಟ್ಟಿನಲ್ಲಿ ಮೇಕೆದಾಟು ಯೋಜನೆ ಒಂಬತ್ತು ಸಾವಿರ ಕೋಟಿ ರೂಪಾಯಿ ಹಣವನ್ನು ಕೂಡ ಸ್ಯಾಂಕ್ಷನ್ ಮಾಡುವ ಕೋರಿಕೆಯನ್ನು ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ಮುಂದೆ ಇಡಲಾಗಿದೆ. ಇದೇ ರೀತಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಪ್ರಮುಖ ಮಂತ್ರಿ ಗಣ ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದಲ್ಲಿ ಹಾಗೂ ವಿಶೇಷವಾಗಿ ಬೆಂಗಳೂರಿನಲ್ಲಿ ನಡೆಯಬೇಕಾಗಿರುವಂತಹ ಕೆಲವೊಂದು ಪ್ರಮುಖ ಯೋಜನೆಗಳ ಹಣಕಾಸಿನ ಅಗತ್ಯತೆಯನ್ನು ಪ್ರಧಾನಿ ನರೇಂದ್ರ ಮೋದಿ ರವರ ಮುಂದೆ ಇಟ್ಟಿದ್ದು ಮೋದಿ ಅವರು ಮುಂದಿನ ದಿನಗಳಲ್ಲಿ ಈ ವಿಚಾರದ ಬಗ್ಗೆ ಸಕಾರಾತ್ಮಕ ನಿರ್ಧಾರವನ್ನು ತೆಗೆದುಕೊಳ್ಳುವಂತಹ ನಿರೀಕ್ಷೆಯಲ್ಲಿ ಎಲ್ಲರೂ ಇದ್ದಾರೆ.