CM Siddaramaiah: ಗ್ಯಾರಂಟಿ ಪಡೆಯುತ್ತಿರುವ ಎಲ್ಲಾ ಮಹಿಳೆಯರಿಗೂ ಹೊಸ ಮನವಿ ಮಾಡಿಕೊಂಡ ಸಿಎಂ
ಇನ್ನೇನು ಲೋಕಸಭೆ ಚುನಾವಣೆ ಕೂಡ ನಡೆಯಲಿದೆ. ವಿವಿಧ ಪಕ್ಷದ ಅಭ್ಯರ್ಥಿಗಳು ಚುನಾವಣೆ ಯಲ್ಲಿ ಗೆಲ್ಲಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಇನ್ನೊಂದೆಡೆ ವಿವಿಧ ಯೋಜನೆಗಳನ್ನು ಜಾರಿ ಗೊಳಿಸುತ್ತೇವೆ ಎನ್ನುವ ಭರವಸೆ ಯನ್ನು ಕೂಡ ಪಕ್ಷಗಳು ನೀಡಿವೆ.ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಪಕ್ಷಗಳು ಹಲವಾರು ರೀತಿಯ ತಂತ್ರಗಳನ್ನು ಹೂಡಿದ್ದು ಇದೀಗ ಸಿಎಂ ಸಿದ್ದರಾಮಯ್ಯ (CM Siddaramaiah) ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.
60 ಸಾವಿರ ಲೀಡ್ ಕೊಟ್ಟು ಗೆಲ್ಲಿಸಿ:
ಮೈಸೂರು-ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರ ಗೆಲ್ಲಲು ಪಣ ತೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು, ವರುಣಾ ನನ್ನ ಪಾಲಿಗೆ ಗೆಲುವಿನ ಕ್ಷೇತ್ರ ನಿಮ್ಮಿಂದ ಎರಡು ಬಾರಿ ಮುಖ್ಯಮಂತ್ರಿಯಾದೆ ನಿಮ್ಮ ಸಹಕಾರ ಯಾವತ್ತು ಇರಲಿ, ನಾನು ಸಿಎಂ ಸ್ಥಾನದಲ್ಲಿರಬೇಕು ಎಂದರೆ ವರುಣಾ ಕ್ಷೇತ್ರದಲ್ಲಿ 60 ಸಾವಿರ ಲೀಡ್ ಕೊಟ್ಟು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಜನತೆಯಲ್ಲಿ ಮನವಿ ಮಾಡಿಕೊಂಡರು.
ಇನ್ನಷ್ಟು ಶಕ್ತಿ ತುಂಬಿ:
ಬಿಳಿಗೆರೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಜನತೆಯ ಅಭಿವೃದ್ದಿಗಾಗಿ ನಾನು ಯಾವತ್ತು ಕೈ ಜೋಡಿಸುತ್ತೇನೆ, ನಾನು ಸಿಎಂ ಸ್ಥಾನದಲ್ಲಿ ಇರಬೇಕೋ ಬೇಡವೋ ನೀವೆ ನಿರ್ಧರಿಸಿ. ವರುಣಾ ಕ್ಷೇತ್ರದಲ್ಲಿ 60 ಸಾವಿರ ಲೀಡ್ ಕೊಟ್ಟು ಸುನಿಲ್ ಬೋಸ್ ಅವರನ್ನು ಗೆಲ್ಲಿಸಿ ಎಂದರು. ಚಾಮರಾಜನಗರ ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಸಮರ್ಥನಾಗಿ, ನನ್ನ ರಾಜಕೀಯ ಶಕ್ತಿಯೂ ಹೆಚ್ಚುತ್ತದೆ ಎಂದರು.
ಗ್ಯಾರಂಟಿ ಪ್ರಸ್ತಾಪ:
ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳ ಅಭಿವೃದ್ದಿಯ ಬಗ್ಗೆ ಪ್ರಸ್ತಾಪ ಮಾಡಿದರು. ನಮ್ಮ ಪಕ್ಷದ ಗ್ಯಾರಂಟಿ ಯೋಜನೆ (Guarantee Scheme)ಯಿಂದಾಗಿ ರಾಜ್ಯದಲ್ಲಿ ಅಭಿವೃದ್ದಿ ಯಾಗಿದೆ. ಮಹಿಳೆಯರಿಗೆ ಆರ್ಥಿಕ ಬೆಂಬಲ, ನಿರುದ್ಯೋಗಿಗಳಿಗೆ ಸಹಾಯಧನ, ಬಡ ವರ್ಗದ ಜನತೆಗೂ ಅರ್ಥಿಕ ಬೆಂಬಲ ನೀಡುತ್ತಿದ್ದೇವೆ. ಇಂದು ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ಬಿಜೆಪಿಯ ಕಾರ್ಯಕರ್ತರೂ, ನಮ್ಮ ಗ್ಯಾರಂಟಿ ಯೋಜನೆಗಳ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದರು.