Drought Relief Fund: ರೈತರಿಗೆ ಬರ ಪರಿಹಾರ ಮೊದಲ ಕಂತಿನ ಹಣ ಬಿಡುಗಡೆ ಬಗ್ಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ.
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಕಾರಣಕ್ಕೆ ಬೆಳೆ ನಾಶದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ಎರಡು ಸಾವಿರ ರೂ. ವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಹೇಳಿದ್ದಾರೆ.
ಪರಿಹಾರ ಬಿಡುಗಡೆಗೆ ಪ್ರಧಾನಿಗೆ ಪತ್ರ:
ಮೊದಲ ಕಂತಿನ ಹಣ ವರ್ಗಾವಣೆ ಬಗ್ಗೆ ಸುದೀರ್ಘ ವಿವರಣೆಯೊಂದಿಗೆ ನನ್ನ ಮಾಹಿತಿಗಳನ್ನು ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಸರ್ ಅವರು ಬರ ಪರಿಹಾರ ಬಿಡುಗಡೆ ಕುರಿತು ಕೇಂದ್ರ ಸರ್ಕಾರಕ್ಕೆ ಅನೇಕ ಬಾರಿ ಬರೆದ ಪತ್ರಗಳಿಗೆ ಇಲ್ಲಿಯವರೆಗೂ ಯಾವುದೇ ಮರು ಉತ್ತರ ಅಥವಾ ಪ್ರಕ್ರಿಯೆ ತಿರುಗಿ ಬಂದಿರುವುದಿಲ್ಲ. ಬರ ಪರಿಹಾರ (Drought Relief) ನೀಡಿದ ಕೇಂದ್ರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅಸಮಾಧಾನ ವ್ಯಕ್ತಪಡಿಸಿ ರೈತರಿಗೆ ಮೊದಲ ಕಂತಿನ ನೀರವು ಘೋಷಣೆ ಮಾಡಿದ್ದು 2000 ವರೆಗೆ ಬರ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಮೂರ್ನಾಲ್ಕು ದಿನಗಳಲ್ಲಿ ರೈತರ ಖಾತೆಗೆ ಹಣ (Drought Relief Fund) ವರ್ಗಾವಣೆ ಮಾಡಲಾಗುವುದು ರಾಜ್ಯದ ಇನ್ನೂ 223 ತಾಲೂಕುಗಳಿಗೆ ಬರ ಘೋಷಣೆಯಾಗಿದ್ದು ಕೇಂದ್ರದಿಂದ ಬಿಳಿ ನಷ್ಟ ಪರಿಹಾರ ಮಾಡಿಲ್ಲ ಹೀಗಾಗಿ ರಾಜ್ಯ ಸರಕಾರದಿಂದ ಮೊದಲ ಕಂತಿನ ಅರ್ಹ ರೈತರಿಗೆ ಬರ ಪರಿಹಾರ ನೀಡಲಾಗುವುದು ಎಂದಿದ್ದಾರೆ.
DBT ಮಾಡಲು ಕ್ರಮ:
ರೈತರಿಗೆ ಮೊದಲ ಹಂತದಲ್ಲಿ 2,000 ರೂ. ವರೆಗೆ ಪರಿಹಾರ ಘೋಷಿಸಲಾಗಿದ್ದು, ಈ ಪರಿಹಾರವನ್ನು ತ್ವರಿತವಾಗಿ ವಿತರಿಸಲು ಮಾರ್ಗಸೂಚಿಗಳನ್ನು ರೂಪಿಸಿ, DBT ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.ಸರ್ಕಾರ ಸಮರ್ಪಕವಾಗಿ ನಡೆಯಲು ನಿಮ್ಮ ಪಾತ್ರ ಬಹುಮುಖ್ಯ. ನೀವು ಸರ್ಕಾರದ ಕಣ್ಣು, ಕಿವಿ ಇದ್ದಹಾಗೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ರಾಜಕಾರಣಿಗಳು, ಅಧಿಕಾರಿಗಳು- ನಾವೆಲ್ಲರೂ ಜನರಿಗೋಸ್ಕರ ಇರುವುದು. ಜನರ ಕೆಲಸವನ್ನು ವೇಗವಾಗಿ ಮಾಡಬೇಕು ಎಂದು ಕಿವಿಮಾತು ಹೇಳಿದರು.
ವಾರದೊಳಗೆ ರೈತರಿಗೆ ಮೊದಲ ಕಂತು ಬಿಡುಗಡೆ:
ಭೀಕರ ಬರದಿಂದ ತತ್ತರಿಸಿರುವರೆ ನಾಡಿನ ರೈತರ ನೆರವಿಗೆ ಭಾವಿಸುವ ಉದ್ದೇಶದಿಂದ ಮೊದಲ ಕಂತಿನ ಬರ ಪರಿಹಾರವಾಗಿ ರುಪಾಯಿ 2000 ನಮ್ಮ ಸರಕಾರದ ವತಿಯಿಂದ ನೀಡಲಾಗುತ್ತಿದೆ ಕೇಂದ್ರ ಸರ್ಕಾರ NTRF ಅನುದಾನಕ್ಕೆ ಕಾಯಿದೆ ರೈತರ ಹಿತ ಕಾಪಾಡುವ ಏಕೈಕ ಉದ್ದೇಶದಿಂದ ತಕ್ಷಣದ ನೆರವನ್ನು ಘೋಷಿಸಲಾಗಿದೆ. ರಾಜ್ಯದಲ್ಲಿ ಜಾನುವಾರುಗಳಿಗೆ ಬರದಿಂದ ಉಂಟಾಗುವ ಮೇವಿನ ಕೊರತೆಯನ್ನು ಸುಧಾರಿಸಲು ಮೇವಿನ ಬೀಸದ ಮತ್ತು ಇತರೆ ಕಾರ್ಯಕ್ರಮವನ್ನು ಎಲ್ಲ ಜಿಲ್ಲೆಗಳಿಗೆ ಸೇರಿ 550 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ನವರು ತಿಳಿಸಿದ್ದಾರೆ.