ರಾಜ್ಯದಲ್ಲಿ ವಾಸಿಸುವ ಬಡ ಕಾರ್ಮಿಕರ ಹಾಗೂ ಕೂಲಿ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರ ಕೆಲವು ಪ್ರಮುಖ ಯೋಜನೆಗಳನ್ನು ಜಾರಿಗೆ ತಂದಿದೆ. ಈಗ ರಾಜ್ಯದಲ್ಲಿ ವಾಸಿಸುವ ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ವಿದ್ಯಾನಿಧಿ ಯೋಜನೆ (Vidyanidhi Scheme) ಯನ್ನು ಆರಂಭಿಸಿದೆ.
ವಿದ್ಯಾನಿಧಿ ಯೋಜನೆ!
ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳ 10ನೇ ತರಗತಿಯ ನಂತರದ ಉನ್ನತ ವಿದ್ಯಾಭ್ಯಾಸಕ್ಕಾಗಿ, ವಿದ್ಯಾನಿಧಿ ಯೋಜನೆ (Vidyanidhi Scheme) ಜಾರಿಗೆ ತರಲಾಗಿದ್ದು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು ಸೇವಾ ಸಿಂಧು ವೆಬ್ಸೈಟ್ ಮೂಲಕ ಅಥವಾ ಗ್ರಾಮ ಕರ್ನಾಟಕವನ್ನು ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸ್ವತಹ ಹೋಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಪೋಷಕರ ಡ್ರೈವಿಂಗ್ ಲೈಸೆನ್ಸ್ (Driving License), ಆಧಾರ್ ಕಾರ್ಡ್ ಹಾಗೂ ವಿದ್ಯಾರ್ಥಿಯ ಆಧಾರ್ ಕಾರ್ಡ್ (Aadhaar Card) ದಾಖಲೆಯನ್ನು ಕೊಡಬೇಕು ಎಂದು ಸಾರಿಗೆ ಇಲಾಖೆ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ.
ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ಲಿಂಕ್: https://sevasindhu.karnataka.gov.in/Sevasindhu/Kannada